ಶಿಕಾರಿಪುರಶಿವಮೊಗ್ಗ

ಶಿಕಾರಿಪುರದಲ್ಲಿ ಸಂಗೊಳ್ಳಿ ರಾಯಣ್ಣ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಉದ್ಘಾಟನೆ

ಶಿಕಾರಿಪುರ: ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಲೋಕಾರ್ಪಣೆಗೊಳಿಸಿದರು.

ನಂತರ ಮಾತನಾಡಿದ ಅವರು, 4.80 ಕೋಟಿ ರೂ. ವೆಚ್ಚದಲ್ಲಿ ಬಸ್‌ ನಿಲ್ದಾಣ ಪೂರ್ಣ ಗೊಂಡಿದ್ದು, ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುವಂತಹ ಬಸ್‌ ನಿಲ್ದಾಣವನ್ನು ತಾಲೂಕು ಕೇಂದ್ರ ದಲ್ಲಿ ನಿರ್ಮಿಸಲಾಗಿದೆ. ಇಂದಿನಿ ಂದಲೇ 20 ನೂತನ ಬಸ್‌ಗಳಿಗೆ ಚಾಲನೆ ನೀಡುತ್ತಿರುವುದು ಹರ್ಷ ತಂದಿದೆ ಎಂದರು.

ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಚಂದ್ರಪ್ಪ, ವಿಧಾನ ಪರಿಷತ್‌ ಸದಸ್ಯರಾದ  ಎಸ್‌. ರುದ್ರೇಗೌಡ,  ಭಾರತಿಶೆಟ್ಟಿ, ಪುರಸಭಾ ಅಧ್ಯಕ್ಷೆ ರೇಖಾಬಾಯಿ, ಪದ್ಮನಾಭ ಭಟ್‌, ಎಸ್‌.ಎಸ್‌. ಜ್ಯೋತಿಪ್ರಕಾಶ್‌  ಹಾಜರಿದ್ದರು.