ಶಿವಮೊಗ್ಗಶಿವಮೊಗ್ಗ ನಗರ

ಮೂಲ ಸೌಲಭ್ಯ ಕಲ್ಪಿಸಲು ಆಗ್ರಹಿಸಿ: ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ

ಶಿವಮೊಗ್ಗ: ನಗರದ ಕೋಟೆ ರಸ್ತೆಯಲ್ಲಿರುವ ಡಾ. ಬಿ.ಆರ್‌. ಅಂಬೇಡ್ಕರ್‌ ಬಾಲಕಿಯರ ವಸತಿ ನಿಲಯದಲ್ಲಿ ಮೂಲ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಇಂದು ಜಿಲ್ಲಾಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಬಾಲಕಿಯರ ವಸತಿ ನಿಲಯ ದಲ್ಲಿ ಸರಿಯಾದ ಊಟದ ವ್ಯವಸ್ಥೆ, ಶುದ್ಧ ನೀರು, ಶೌಚಾಲ ಯ ವ್ಯವಸ್ಥೆ ಸರಿ ಇಲ್ಲ. ವಿದ್ಯಾರ್ಥಿನಿಯರಿಗೆ ಪದೇ ಪದೇ ಆರೋಗ್ಯ ಸಮಸ್ಯೆ ಉಂಟಾ ಗುತ್ತಿದೆ. ವಸತಿ ನಿಲಯದಿಂದ ಮನೆ, ಮನೆಯಿಂದ ವಸತಿ ನಿಲಯಕ್ಕೆ ಅಲೆದಾಡುವಂತಹ ಪರಿಸ್ಥಿತಿ ಬಂದಿದೆ. ಸಂಬಂಧ ಪಟ್ಟವರು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.

ವಸತಿ ನಿಲಯಕ್ಕೆ ಪೋಷಕರು ಹೋದರೂ ಕೂಡ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೂಡಲೇ ಇಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ಉತ್ತಮ ಗುಣಮಟ್ಟದ ಆಹಾರ, ಕುಡಿಯಲು ಶುದ್ಧ ನೀರು, ಶೌಚಾಲಯ ವ್ಯವಸ್ಥೆ ಮಾಡಿಕೊ ಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ವಾಟಾಳ್‌ ಮಂಜುನಾಥ್‌, ಪ್ರಮುಖರಾದ ಪ್ರಶಾಂತ್‌, ರವಿ ಸಾಧುಶೆಟ್ಟಿ, ಅರ್ಚನಾ, ಸಂತೋಷ್‌, ರಮೇಶ್‌, ಲೋಕೇಶ್‌ ಇದ್ದರು.