ಮಾ.22ರಂದು ಐತಿಹಾಸಿಕ ಮಾವಿನಕೆರೆ ಶಿಲುಬೆ ಬೆಟ್ಟದ ಮಹೋತ್ಸವ : ದಿವ್ಯ ಕರುಣೇಶ್ ಕ್ಯಾಪುಚಿನ್ ಹಾಗೂ ಭಕ್ತಿಯುತ ಜೀವಂತ ಶಿಲುಬೆ ಹಾದಿಯ ಪ್ರದರ್ಶನ, ವಿಐಎಸ್ಎಲ್-ಎಂಪಿಎಂ ಉಳಿವಿಗಾಗಿ ಪ್ರಾರ್ಥನೆ
ಭದ್ರಾವತಿ: ತಾಲೂಕಿನ ಮಾವಿನಕೆರೆ ಗ್ರಾಮದ ಕಿರಿಯ ಪುಷ್ಪ ಸಂತ ತೆರೇಸರ ದೇವಾಲ ಯದಲ್ಲಿ ಮಾ.22 ರಂದು ಐತಿಹಾಸಿಕ ಮಾವಿನಕೆರೆ ಶಿಲುಬೆ ಬೆಟ್ಟದ ಮಹೋತ್ಸವ ಹಾಗೂ ಭಕ್ತಿಯುತ ಜೀವಂತ ಶಿಲುಬೆ ಹಾದಿಯ ಪ್ರದರ್ಶನ ಏರ್ಪಡಿಸ ಲಾಗಿದೆ ಎಂದು ದೇವಾಲಯದ ಧರ್ಮಗುರು ಪಾದರ್ ದಿವ್ಯ ಕರುಣೀಶ್ ಕ್ಯಾಪುಚಿನ್ ಹೇಳಿ ದರು.
ಪತ್ರಿಕಾಗೋಷ್ಟಿಯಲ್ಲಿ ಮಾತ ನಾಡಿದ ಅವರು, ಕಳೆದ 4 ವರ್ಷ ಗಳಿಂದ ನ್ಯೂಟೌನ್, ಹಳೇನಗರ, ಕಾಗದನಗರ ಹಾಗೂ ಕಾರೇಹಳ್ಳಿ ಧರ್ಮಕೇಂದ್ರದ ಭಕ್ತರು ಜೀವಂತ ಶಿಲುಬೆ ಹಾದಿಯ ಪ್ರದರ್ಶನ ತ್ಯಾಗ ಮತ್ತು ಭಕ್ತಿಯಿಂದ ನಡೆಸು ತ್ತಿದ್ದಾರೆ.
2 ಸಾವಿರ ವರ್ಷಗಳ ಹಿಂದಿನ ದಿನಗಳಲ್ಲಿ ಯೇಸುವಿನ ಪಾಡು, ಯಾತನೆ ಹಾಗೂ ಮರಣವನ್ನು ಅಭಿನಯದಿಂದ ಮರುಕಳುಹಿಸು ವುದೇ ಜೀವಂತ ಶಿಲುಬೆಯ ಹಾದಿ ಯಾಗಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಸುಮಾರು 2 ಗಂಟೆ ವರೆಗೆ ಪ್ರದರ್ಶನ ನಡೆಯಲಿದ್ದು, ನೈಜತೆ ಅನಾವರಣಗೊಳ್ಳಲಿದೆ ಎಂದರು.
12 ಗಂಟೆಗೆ ದಿವ್ಯ ಬಲಿಪೂಜೆ. ಮಧ್ಯಾಹ್ನ 1 ಗಂಟೆಗೆ ಅನ್ನಸಂತ ರ್ಪಣೆ ಕಾರ್ಯ ನೆರವೇರಲಿದೆ. ತಾಲೂಕಿನ ವಿವಿಧ ಕ್ರೈಸ್ತ ದೇವಾ ಲಯಗಳ 2 ಸಾವಿರಕ್ಕೂ ಹೆಚ್ಚು ಭಕ್ತರು ಶಿಲುಬೆ ಬೆಟ್ಟದ ಮಹೋ ತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳ ಲಿದ್ದಾರೆ ಎಂದರು.
ಆಲ್ ಇಂಡಿಯಾ ಕ್ಯಾಥೊ ೕಲಿಕ್ ಯೂನಿಯನ್ (ಎಐಸಿ ಯು) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಮಾತನಾಡಿ, ಐತಿಹಾಸಿಕ ಮಾವಿನಕೆರೆ ಶಿಲುಬೆ ಬೆಟ್ಟದ ಮಹೋತ್ಸವಕ್ಕೆ ವರ್ಷದಿಂದ ವರ್ಷಕ್ಕೆ ಭಕ್ತಾಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜೀವಂತ ಶಿಲುಬೆ ಹಾದಿಯ ಪ್ರದರ್ಶನ ಭಕ್ತರಲ್ಲಿ ಒಂದು ಅದ್ಭುತ ಶಕ್ತಿ, ಚೈತನ್ಯ ತಂದು ಕೊಡಲಿದೆ. ಇಂತಹ ಪವಿತ್ರ ಕಾರ್ಯಕ್ರಮದಲ್ಲಿ ಈ ಬಾರಿ ವಿಐಎಸ್ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಪುನರ್ ಆರಂಭ ಹಾಗೂ ಅಭಿವೃದ್ಧಿ ಕುರಿತು, ದೇಶದಲ್ಲಿರುವ ಎಲ್ಲರ ಏಳಿಗೆಗಾಗಿ ಪ್ರಾರ್ಥನೆ ಸಲ್ಲಿಸಲಾ ಗುವುದು. ಹೆಚ್ಚಿನ ಮಾಹಿತಿಗಾಗಿ 8971709281ಕ್ಕೆ ಸಂಪರ್ಕಿಸಬ ಹುದಾಗಿದೆ ಎಂದರು. ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ಧರ್ಮ ಗುರು ಪಾದರ್ ಲಾನ್ಸಿ ಡಿಸೋಜಾ ಮಾತನಾಡಿ, ನಾವು ಸೇವಿಸುವ ಆಹಾರ ಯಾವುದಾದರೂ ಇರಲಿ ಉತ್ತಮ ದೇಹ, ಪರಿಶುದ್ಧ ಮನ ಸ್ಸು, ಭಾವನೆಗಳನ್ನು ಹೊಂದುವ ನಿಟ್ಟಿನಲ್ಲಿ ಅನುಸರಿಸುವ ಆಚರಣೆ ಗಳಿಗೆ ಹೆಚ್ಚಿನ ಗಮನ ನೀಡಬೇ ಕಾಗಿದೆ. ಈ ನಿಟ್ಟಿನಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದರು.
ಗಾಂನಗರ ವೇಲಾಂಗಣಿ ಮಾತೆ ದೇವಾಲಯಗಳ ಧರ್ಮ ಗುರು ಪಾದರ್ ಸ್ಟೀವನ್ ಡೇಸಾ ಮಾತನಾಡಿ, ಬಲಿಪೂಜೆ ಮಹತ್ವ ಹಾಗು ಕ್ರೈಸ್ತ ಧರ್ಮದ ಆಚರ ಣೆಯಲ್ಲಿ ಅನುಸರಿಸುವ ಕ್ರಮಗಳನ್ನು ವಿವರಿಸಿದರು.
ಕಾಗದನಗರದ ಸಂತ ಜೋ ಸೆರ ದೇವಾಲಯ ಧರ್ಮಗುರು ಡೊನೆಮಿಕ್ ಕ್ರಿಸ್ತರಾಜ್, ಡಾನ್ ಬೋಸ್ಕೋ ಕೈಗಾರಿಕಾ ತರಬೇತಿ ಸಂಸ್ಥೆ ನಿರ್ದೇಶಕ ಪಾದರ್ ಆರೋಗ್ಯ ರಾಜ್, ಪ್ರಮುಖರಾದ ದೇವಾಲಯದ ಪಾಲನ ಪರಿಷತ್ ಕಾರ್ಯದರ್ಶಿ ಅಂತೋಣಿ ಡಿಕಾ ಸ್ಟ, ಸೆಲ್ವರಾಜ್, ಡೇವಿಸ್, ನಗರ ಸಭಾ ಸದಸ್ಯ ಜಾರ್ಜ್ ಇದ್ದರು.