ಶಿವಮೊಗ್ಗಶಿವಮೊಗ್ಗ ನಗರ

ಶಿವಮೊಗ್ಗದಲ್ಲಿ ದೇಶದ 5ನೇ ರಕ್ಷಾ ವಿವಿ ಕಾರ್ಯ್ರಂಭ : ಕೆಎಸ್‌ಈ

   ಶಿವಮೊಗ್ಗ : ದೇಶದ ಯುವ ಜನರಲ್ಲಿ ದೇಶಾಭಿಮಾನ, ದೇಶ ಭಕ್ತಿ ಮತ್ತು ಅಭಿಮಾನ ಮೂಡಿ ಸುವ ನಿಟ್ಟಿನಲ್ಲಿ ಹಾಗೂ ದೇಶದ ಆಂತರಿಕ ಭದ್ರತೆಗೆ ಶಕ್ತಿ ತುಂಬು ವಲ್ಲಿ ದೇಶದ 5ನೇ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಶಿವಮೊಗ್ಗ ದಲ್ಲಿ ಪ್ರಸಕ್ತ ಸಾಲಿನಿಂದಲೇ ಆರಂಭಗೊಳ್ಳಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್‌.ಈಶ್ವರಪ್ಪ ಅವರು ಹೇಳಿದರು.    

   ಅವರು ಶುಕ್ರವಾರ ರಾಗಿಗುಡ್ಡದ ಹಳೆಯ ಕೇಂದ್ರೀಯ ವಿದ್ಯಾಲಯದ ಕಟ್ಟಡದಲ್ಲಿ ತಾತ್ಕಾ ಲಿಕವಾಗಿ ಆರಂಭಗೊಳ್ಳುತ್ತಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲ ಯವನ್ನು ಉದ್ಘಾಟಿಸಿ ಮಾತನಾ ಡುತ್ತಿದ್ದರು. ದೇಶದ ರಕ್ಷಣಾ ಇಲಾಖೆಗೆ ಬಲತುಂಬುವ ನಿಟ್ಟಿ ನಲ್ಲಿ ಹಾಗೂ ರಾಜ್ಯದ ಯುವ ಜನಾಂಗಕ್ಕೆ ಅಗತ್ಯವಿರುವ ಯೋಜ ನೆಗಳನ್ನು ರೂಪಿಸಿ ಅನುಷ್ಠಾನಗೊ ಳಿಸುವಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಹೆಚ್ಚಿನ ಅನುದಾನವನ್ನು ಖರ್ಚು ಮಾಡುತ್ತಿದೆ ಎಂದವರು ನುಡಿದರು.

   ಈ ವಿಶ್ವವಿದ್ಯಾಲಯದ ಆರಂ ಭದಿಂದಾಗಿ ರಾಜ್ಯದ ಯುವಕರು ವಿಶೇಷ ಮಹತ್ವದ ಪದವಿ ಮತ್ತು ಸ್ನಾತಕೋತ್ತರ ತರಬೇತಿಗಳನ್ನು ಪಡೆಯಲಿದ್ದಾರೆ ಎಂದ ಅವರು, ಹೆಚ್ಚಿನ ಯುವಕರು ರಕ್ಷಣಾ ಘಟಕಗಳಲ್ಲಿ ಉದ್ಯೋಗಾವಕಾಶ ಪಡೆಯಲಿದ್ದಾರೆ ಎಂದವರು ನುಡಿದರು.

   ಕಾರ್ಯಕ್ರಮದಲ್ಲಿ ಉಪಸ್ಥಿತ ರಿದ್ದ  ಸಾಂಸದ ಬಿ.ವೈ.ರಾಘ ವೇಂದ್ರ ಅವರು ಮಾತನಾಡಿ, ದೇಶದ ರಕ್ಷಣಾ ವಿಭಾಗಗಳಲ್ಲಿ ಸೇವೆ ಸಲ್ಲಿಸಲಿಚ್ಚಿಸುವ ಯುವ ಕರಿಗೆ ಇಲ್ಲಿನ ವಿಶ್ವವಿದ್ಯಾಲಯ ದಲ್ಲಿ ತರಬೇತಿ ಪಡೆಯುವುದ ರಿಂದಾಗಿ ಉದ್ಯೋಗಾವಕಾಶಗಳು ಲಭಿಸಲಿವೆ. ಅದಕ್ಕಾಗಿ ಇಂದು ರಾಜ್ಯವು ರಕ್ಷಾ ವಿವಿಯೊಂದಿಗೆ ಮಹತ್ವದ ಒಡಂಬಡಿಕೆ ಮಾಡಿ ಕೊಂಡಿದೆ ಎಂದ ಅವರು, ದೇಶದ ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರ ಗಳಲ್ಲಿ ಅಗತ್ಯವಿರುವ ಮಾನವ ಸಂಪನ್ಮೂಲಗಳನ್ನು ಒದಗಿಸುವಲ್ಲಿ ಹಾಗೂ ಸಶಕ್ತ ಭಾರತ ನಿರ್ಮಿ ಸುವಲ್ಲಿ ಈ ವಿಶ್ವವಿದ್ಯಾಲಯ ಸಹಕಾರಿಯಾಗಲಿದೆ ಎಂದರು.

   ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರು ಉಲ್ಲೇಖಿಸಿ ದಂತೆ ಇಲ್ಲಿ ಶಿಕ್ಷಣ ಪಡೆವ ಪ್ರತಿ ವಿದ್ಯಾರ್ಥಿಯೂ ಭಾರತದ ಅನರ್ಘ್ಯ ರತ್ನಗಳಾಗಿ ಹೊರಹೊ ಮ್ಮಲಿದ್ದಾರೆ. ಇಲ್ಲಿನ ವಿದ್ಯಾರ್ಥಿ ಗಳ ಭವಿಷ್ಯ ಉಜ್ವಲವಾಗಿರಲಿದೆ. ಎಂದ ಅವರು, ಇಲ್ಲಿನ ಮೂಲ ಭೂತ ಸೌಕರ್ಯಗಳು, ಸ್ಮಾರ್ಟ್‌ ಗ್ರಂಥಾಲಯ, ವಿದ್ಯಾರ್ಥಿನಿಲ ಯ, ಅತ್ಯಾಧುನಿಕ ತರಬೇತಿ ಕೇಂದ್ರಗಳು ಸೇರಿದಂತೆ ಭೌತಿಕ ಸ್ವರೂಪದ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 10ಕೋಟಿ ರೂ.ಗಳ ಅನುದಾನ ಮಂಜೂರಾಗಿದೆ ಎಂದರು.

   ಜಿಲ್ಲೆಯಲ್ಲಿ ಕಳೆದ 6-8 ವರ್ಷಗಳ ಅವಯಲ್ಲಿ ಹಿಂದೆಂ ದೂ ಕಂಡಿರದ ಅಭಿವೃದ್ಧಿ ಕಾರ್ಯ ಗಳು ನಿರಂತರವಾಗಿ ನಡೆಯು ತ್ತಲೇ ಇವೆ. ಅವುಗಳಲ್ಲಿ ವಿಶೇಷ ವಾಗಿ ಕೃಷಿ ಮತ್ತು ತೋಟಗಾರಿಕೆ, ಆಯುಷ್‌, ರಕ್ಷಾ ವಿವಿ ಆರಂಭ ಗೊಳ್ಳುತ್ತಿರುವುದು ಶೈಕ್ಷಣಿಕ ಕ್ಷೇತ್ರದ ಕ್ರಾಂತಿಯಾಗಿದೆ ಎಂದು ಭಾವಿಸಬಹುದಾಗಿದೆ ಎಂದರು.

   ಈ ಸಂದರ್ಭದಲ್ಲಿ ಉಪಸ್ಥಿತ ರಿದ್ದ ರಾಷ್ಟ್ರೀಯ ರಕ್ಷಾ ವಿವಿಯ ಉಪಕುಲಪತಿ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ನಿರ್ದೇಶಕರ ಡಾ॥ ಆನಂದಕುಮಾರ್‌ ತ್ರಿಪಾಠಿ ಅವರು ಮಾತನಾಡಿ, ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ತರಬೇತಿ ಗಳು ಆರಂಭಗೊಳ್ಳಲಿವೆ.

   ಪೊಲೀಸ್‌ ಆಡಳಿತ ಮತ್ತು ಆಂತರಿಕ ಭದ್ರತೆ, ಕೃತಕ ಬುದ್ದಿ ಮತ್ಯೆ, ಯಂತ್ರಕಲಿಕೆ, ದತ್ತಾಂಶ ವಿಜ್ಞಾನ,  ಅಪರಾಧಶಾಸ,  ವರ್ತ ನೆಯ ವಿಜ್ಞಾನ, ಡಿಜಿಟಲ್‌ ೇರೆನ್ಸಿಕ್‌, ಪೋರೆನ್ಸಿಕ್‌ ಸೈಕಾಲಜಿ, ಮಿಲಿಟರಿ ವ್ಯವಹಾ ರಗಳು- ತಂತ್ರಗಳು ಮತ್ತು ಲಾಜಿಸ್ಟಿಕ್‌್ಸ, ಭದ್ರತೆ ಮತ್ತು ಅಪ ರಾಧ, ಕಾನೂನುಗಳು, ಕರಾವಳಿ ಕಡಲ ಮುಂತಾದ ವಿಜ್ಞಾನ ಕ್ಷೇತ್ರ ಗಳಲ್ಲಿ ವಿದ್ಯಾರ್ಥಿಗಳಿಗೆ ಬೋದನೆ ನಡೆಯಲಿದೆ. ವಾಯು ಮತ್ತು ಬಾಹ್ಯಾಕಾಶ ಭದ್ರತೆ, ಅನ್ವಯಿಕ ವಿಜ್ಞಾನ ಮತ್ತು ಇಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ, ವಿದೇಶಾಂಗ ವ್ಯವಹಾರಗಳು, ವಿದೇಶಿ ಭಾಷೆ ಗಳು, ರಾಜಕೀಯ ಆರ್ಥಿಕತೆ, ಕ್ರೀಡೆ ಮತ್ತು ದೈಹಿಕ ಶಿಕ್ಷಣ ವಿಷಯಗಳಲ್ಲಿ ತರಬೇತಿಗಳು ನಡೆಯಲಿವೆ ಎಂದ ಅವರು, ಇಲ್ಲಿನ ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿ್‌‍, ಇಂಟರ್ನ್‌ಶಿ್‌‍ ಮತ್ತು ಪ್ಲೇಸ್‌ಮೆಂಟ್‌, ಹಣಕಾಸಿನ ನೆರವು ಒದಗಿಸುತ್ತದೆ. ಅಲ್ಲದೆ ಇಲ್ಲಿ ವಿಶೇಷ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾ ರವು ನೇಮಕಾತಿಯಲ್ಲಿ ಆದ್ಯತೆ ನೀಡುವಲ್ಲಿ ಕ್ರಮ ವಹಿಸ ಬೇಕೆಂದವರು ನುಡಿದರು.

   ಬೆಂಗಳೂರಿನಲ್ಲಿ ಕೇಂದ್ರ ಗೃಹಸಚಿವ ಅಮಿತ್‌ಶಾ ಅವರು ವರ್ಚುವಲ್‌ ಮೂಲಕ ಕಾರ್ಯ ಕ್ರಮವನ್ನು ಉದ್ಘಾಟಿಸಿದರು.  ಮಾನ್ಯ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಗೃಹಸಚಿವ ಆರಗಜ್ಞಾನೇಂದ್ರ ಸೇರಿದಂತೆ ಸಂಬಂತ ಇಲಾಖೆಗಳ ರಾಜ್ಯ ಮಟ್ಟದ ಉನ್ನತ ಅಕಾರಿಗಳು ಉಪಸ್ಥಿತರಿ ದ್ದರು.

        ಅಂತೆಯೇ ರಾಗಿಗುಡ್ಡದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಕಾರಿ ಡಾ॥ ಆರ್‌.ಸೆಲ್ವಮಣಿ, ಜಿಲ್ಲಾ ಪೊಲೀಸ್‌ ವರಿಷ್ಠಾಕಾರಿ ಮಿಥುನ್‌ಕುಮಾರ್‌, ಮೇಯರ್‌ ಶಿವಕುಮಾರ್‌, ಸೂಡಾ ಅಧ್ಯಕ್ಷ ನಾಗರಾಜ್‌, ರಕ್ಷಾ ವಿವಿಯ ಧರ್ಮೇಂದ್ರಕುಮಾರ್‌, ವಿ.ಪಿ .ಸಿಂಗ್‌ಶೇಖಾವತ್‌ ಮತ್ತಿತರರರು ಉಪಸ್ಥಿತರಿದ್ದರು.