ಟೈರಿಗೆ ಬೆಂಕಿ ಹಚ್ಚಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತ
ಶಿವಮೊಗ್ಗ: ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಕ್ಷೇತ್ರಕ್ಕೆ ಸಂಬಂಸಿದಂತೆ ಕಾಂಗ್ರೆಸ್ ಪಕ್ಷ ದಲ್ಲಿ ಭಾರೀ ಬೇಗುದಿ, ಬಂಡಾಯ ಭುಗಿಲೆದ್ದಿದ್ದು, ಕಾರ್ಯಕರ್ತರು ಪಕ್ಷದ ಕಚೇರಿ ಮುಂದೆ ಮತ್ತು ಕೆ.ಬಿ. ಪ್ರಸನ್ನಕುಮಾರ್ ಅವರ ನಿವಾಸದ ಮನೆಯ ಮುಂದೆ ಟೈರಿಗೆ ಬೆಂಕಿ ಹಚ್ಚಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಿನ್ನೆಯಿಂದಲೇ ಆರಂಭವಾದ ಬಂಡಾಯದ ಆಕ್ರೋಶ ಇಂದೂ ಕೂಡ ಮುಂದುವರಿದಿದ್ದು, ಕಾಂಗ್ರೆಸ್ ಪಕ್ಷದ ಕಚೇರಿಗೆ ಬೀಗ ಹಾಕಿ ಕಚೇರಿ ಮುಂದೆ ಪಲ್ಲವಿ ಹಾಗೂ ಹೆಚ್.ಎಸ್. ಸುಂದರೇಶ್ ಅಭಿಮಾನಿಗಳು ಟೈರಿಗೆ ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಗೆಲ್ಲುವ ಅಭ್ಯರ್ಥಿಗಳಿಗೆ ಮತ್ತು ನಿಷ್ಠಾವಂತೆ ಕಾರ್ಯಕರ್ತರಿಗೆ ಟಿಕೆಟ್ ನೀಡಿಲ್ಲ. ಸುಂದರೇಶ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ. ಅಂತಹವರಿಗೆ ಟಿಕೆಟ್ ನೀಡದೆ ಇರುವುದು ತುಂಬಾ ಅನ್ಯಾಯ ವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಲ್ಲವಿ ಅಭಿಮಾನಿಗಳು ಕೂಡ ತಮ್ಮ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದರು. ನಿನ್ನೆ ಕೂಡ ಮಾಜಿ ಶಾಸಕ ಪ್ರಸನ್ನಕುಮಾರ್ ಮನೆಯ ಮುಂದೆ ಅವರ ಅಭಿಮಾನಿಗಳು ಟೈರು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಗ್ರಾಮಾಂತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ನಾರಾಯಣ ಸ್ವಾಮಿ ಕೂಡ ಬಂಡಾಯವಾಗಿ ಸ್ಪರ್ಧಿಸುವೆ ಎಂದು ಪ್ರಕಟಿಸಿ ದ್ದಾರೆ. ಇದರ ಜೊತೆಗೆ ಗ್ರಾಮಾಂ ತರ ಕ್ಷೇತ್ರದ ಮತ್ತೋರ್ವ ಆಕಾಂ ಕ್ಷಿಯಾಗಿದ್ದ ರವಿಕುಮಾರ್ ಕೂಡ ಬೋವಿ ಸಮಾಜದ ವತಿಯಿಂದ ನಾವು ಅಭ್ಯರ್ಥಿಯನ್ನು ಕಣಕ್ಕಿಳಿ ಸುತ್ತೇವೆ ಎಂದು ಪ್ರಕಟಿಸಿದ್ದಾರೆ.
ಒಟ್ಟಾರೆ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಎರಡೂ ಕ್ಷೇತ್ರಗಳಲ್ಲೂ ಕೂಡ ಕಾಂಗ್ರೆಸ್ಗೆ ಬಂಡಾಯದ ಬಿಸಿ ತಟ್ಟಿದ್ದು, ಹೈಕ ಮಾಂಡ್ ಇದನ್ನು ಹೇಗೆ ಶಮನ ಮಾಡುತ್ತದೆಯೋ ಗೊತ್ತಿಲ್ಲ.