ಜಿಲ್ಲಾ ಸುದ್ದಿ

ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಪಕ್ಷದ ಅಭ್ಯರ್ಥಿ ಶಾರದ ಪೂರ‍್ಯಾನಾಕ್ಕ್ ರಿಂದ ನಾಮಪತ್ರ ಸಲ್ಲಿಕೆ

ಶಿವಮೊಗ್ಗ : ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಶಾರದ ಪೂರ‍್ಯಾನಾಕ್ಕ್   ತಮ್ಮ ಸಾವಿರಾರು ಬೆಂಬಲಿಗ ರೊಂದಿಗೆ ರವೀಂದ್ರ ನಗರದಿಂದ ಮೆರವಣಿಗೆಯಲ್ಲಿ ಬಂದು ತಾಲೂಕು ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳೊಂದಿಗೆ ಅವರು ಪೂಜೆ ಸಲ್ಲಿಸಿ, ಅಲ್ಲಿಂದ ಮೆರವಣಿಗೆಯಲ್ಲಿ ಸಾಗಿದರು. ಅವರ ಜೊತೆಗೆ ನೂರಾರು ಲಂಬಾಣಿ ಮಹಿಳೆಯರು ವಿಶಿಷ್ಟವಾದ ರೀತಿಯ ಲಂಬಾಣಿ ನೃತ್ಯ ಮಾಡಿದರು. ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಮಾತ ನಾಡಿದ ಶಾರದಾ ಪೂರ‍್ಯಾನಾಕ್ಕ್, ನನ್ನ ಗೆಲುವು ನಿಶ್ಚಿತ. ಗ್ರಾಮೀಣ ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದಾರೆ. ಈ ಬಾರಿ ಜೆಡಿಎಸ್‌ ಅನ್ನು ಗೆದ್ದೇ ಗೆಲ್ಲಿಸುತ್ತಾರೆ. ನನ್ನ ಅಧಿಕಾರಾ ವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇನೆ ಅದು ಜನರ ಮನಸ್ಸಿನಲ್ಲಿದೆ. ನಾನು ಗೆದ್ದು ಬಂದರೆ ಮತ್ತಷ್ಟು ಅಭಿವೃದ್ಧಿ ಮಾಡುವೆ ಎಂದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್‌ ಅವರು ಮಾತನಾಡುತ್ತಾ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿಯಲ್ಲಿ ನಮ್ಮ ಪಕ್ಷ ಖಂಡಿತ ಅಪಾರ ಮುನ್ನೆಡೆಯ ಮತಗಳಿಂದ ಜಯಶಾಲಿಯಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಯುವ ಮುಖಂಡ ಎಸ್‌.ಎಲ್‌. ನಿಖಿಲ್‌,ಮಹೇಶ್‌, ಶಿವಾನಾಯ್ಕ, ನಾಗರಾಜ ಕಂಕಾರಿ, ಪಾಲಾಕ್ಷಿ, ಪುಷ್ಪಾ, ರಾಜಣ್ಣ ಮತ್ತಿತರರಿದ್ದರು.