ಡಾ. ಶ್ರೀನಿವಾಸ ಕರಿಯಣ್ಣ ನಾಮಪತ್ರ ಸಲ್ಲಿಕೆ
ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾವಿರಾರು ಬೆಂಬಲಿಗರೊಂದಿಗೆ ಡಾ. ಶ್ರೀನಿ ವಾಸ ಕರಿಯಣ್ಣ ನಾಮಪತ್ರ ಸಲ್ಲಿಸಿದರು.
ಬೆಳಿಗ್ಗೆ ರವೀಂದ್ರನಗರದ ಗಣಪತಿ ದೇವ ಸ್ಥಾನದಲ್ಲಿ ಪೂಜೆ ಸಲ್ಲಿಸಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಬಂದ ಶ್ರೀನಿವಾಸ ಕರಿಯಣ್ಣ ತಾಲೂಕು ಪಂಚಾಯಿತಿ ಕಚೇರಿ ಯಲ್ಲಿ ಚುನಾವಣಾಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಗೆಲುವು ಖಚಿತವಾಗಿದೆ. ಗ್ರಾಮಾಂತರ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಆಡಳಿತ ಪಕ್ಷದ ಶಾಸಕರು ವಿಲರಾಗಿದ್ದಾರೆ. ತಾವು ಅಕಾರಕ್ಕೆ ಬಂದರೆ ಇಡೀ ಗ್ರಾಮಾಂತರ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತೇನೆ. ಮೂಲಭೂತ ಸೌಕರ್ಯ ಗಳನ್ನ ಒದಗಿಸುತ್ತೇನೆ. ಕಾರ್ಯಕರ್ತರು, ಅತ್ಯಂತ ಶ್ರಮದಿಂದ ನನ್ನ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ನನ್ನ ಗೆಲುವು ಖಚಿತ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ವೈ.ಹೆಚ್. ನಾಗರಾಜ್, ಶಹಾಬುದ್ದೀನ್, ಹೆಚ್.ಎಲ್. ಷಡಾಕ್ಷರಿ, ರಾಜಶೇಖರ್ ಸೇರಿದಂತೆ ಅಪಾರ ಬೆಂಬಲಿಗರು ಇದ್ದರು.