ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್ ಎಲ್ಲಾ ಏಳು ಸ್ಥಾನಗಳಲ್ಲಿಯೂ ಗೆಲುವು ಸಾಸುವುದು ಖಚಿತ :ಎಸ್.ಪಿ.ಶೇಷಾದ್ರಿ
ಶಿವಮೊಗ್ಗ: ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್ ಎಲ್ಲಾ ಏಳು ಸ್ಥಾನಗಳಲ್ಲಿಯೂ ಗೆಲುವು ಸಾಸುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಕುರುಬ ಸಮಾಜದ ಮುಖಂಡ ಎಸ್.ಪಿ.ಶೇಷಾದ್ರಿ ಹೇಳಿದರು.
ಅವರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಶ್ರೀನಿವಾಸ ಕರಿಯಣ್ಣ ಹಾಗೂ ನಗರ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ಅವರಿಗೆ ನಾಮಪತ್ರ ಸಲ್ಲಿಸುವ ಸಂದರ್ಭ ದಲ್ಲಿ ಶುಭ ಹಾರೈಸಿ ಮಾತನಾ ಡಿದರು.
ಕಾಂಗ್ರೆಸ್ ಪಕ್ಷ ಹಲವು ಗ್ಯಾರಂಟಿಗಳನ್ನು ನೀಡಿದೆ. ಹಾ ಗಾಗಿ ಗ್ಯಾರಂಟಿಯಾಗಿ ಈ ಬಾರಿ ಅಕಾರದ ಚುಕ್ಕಾಣಿ ಹಿಡಿಯು ತ್ತದೆ. ಪಕ್ಷದಲ್ಲಿ ಹೊಸ ಸಂಚಲನ ಉಂಟಾಗಿದ್ದು, ಶಿವಮೊಗ್ಗ ಜಿಲ್ಲೆ ಯಲ್ಲು ಕೂಡ ಪಕ್ಷ ಜಯಭೇರಿ ಬಾರಿಸಲಿದೆ ಎಂದರು.
ಬಿಜೆಪಿಯ ಯಾವುದೇ ಸೂತ್ರ ಗಳು ಕರ್ನಾಟಕಕ್ಕೆ ಅನುಕೂಲವಾ ಗುವುದಿಲ್ಲ. ಆ ಪಕ್ಷೆದ ಕಾರ್ಯ ಕರ್ತರು ಭ್ರಮನಿರಸನಗೊಂಡಿ ದ್ದಾರೆ. ಭಾವನಾತ್ಮ ವಿಚಾರಗಳು ಅನುಕೂಲಕರವಾಗುವುದಿಲ್ಲ. ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ಇದ್ದಾಗ ಭ್ರಷ್ಟಾಚಾರಕ್ಕೆ ಮಣೆ ಹಾಕಿರಲಿಲ್ಲ. ಆದರೆ ಬಿಜೆಪಿ ಸರ್ಕಾರ ಶೇ.40ರಷ್ಟು ಕಮಿಷನ್ ಸೇರಿದಂತೆ ಅನೇಕ ವಿಷಯಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.
ಎಐಸಿಸಿ ನಾಯಕರಾದ ರಾಹುಲ್ ಗಾಂಯವರು 3980 ಕಿ.ಮೀ. ಪಾದಯಾತ್ರೆ ಮಾಡಿ ದಾಖಲೆ ಮಾಡಿದ್ದಾರೆ. ಕರ್ನಾಟಕ ದಲ್ಲಿ ಈ ಬಾರಿ ಕಾಂಗ್ರೆಸ್ 140 ಸೀಟುಗಳನ್ನು ಗೆದ್ದು ಸ್ವತಂತ್ರವಾಗಿ ಆಡಳಿತ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.