ಜಿಲ್ಲಾ ಸುದ್ದಿತಾಜಾ ಸುದ್ದಿ

ಆಯ್ನೂರು ಜೆಡಿಎಸ್‌ ಅಭ್ಯರ್ಥಿಯಾಗಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಹಲವು ರಾಜಕೀಯ ತಿರುವುಗಳ ನಡುವೆ ಆಯನೂರು ಮಂಜುನಾಥ್‌ ಜೆಡಿಎಸ್‌ ಅಭ್ಯರ್ಥಿಯಾಗಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಯಾರನ್ನು ಕಣಕ್ಕಿಳಿಸುತ್ತದೆ ಎಂಬ ಲೆಕ್ಕಾಚಾರದಲ್ಲಿದ್ದ ಆಯನೂರು ಮಂಜುನಾಥ್‌ ತಮ್ಮ ನಿರ್ಧಾರ ಪ್ರಕಟಿಸಲು ಸಮ ಯವನ್ನೂ ತೆಗೆದುಕೊಂಡರು. ಆದರೆ ರಂಗೋಲಿ ಕೆಳಗೆ ನುಸುಳಿದ ಬಿಜೆಪಿ ಆಯನೂರು ರಾಜೀನಾಮೆ ಕೊಟ್ಟು ಜೆಡಿಎಸ್‌ ಸೇರಿದ ನಂತರ ಅಭ್ಯರ್ಥಿಯನ್ನು ಪ್ರಕಟಿಸಿದರು.

ನಾಮಪತ್ರ ಸಲ್ಲಿಸುವ ಮೊದಲು ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಜೆಡಿಎಸ್‌ಗೆ ಅತಿಹೆಚ್ಚಿನ ಸ್ಥಾನಗಳು ಲಭಿಸಲಿವೆ. ಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಜೆಡಿಎಸ್‌ ಪಕ್ಷವನ್ನು ಎಲ್ಲಾ ವರ್ಗದ ಜನರು ಪ್ರೀತಿಸುತ್ತಿದ್ದಾರೆ. ಕಾರ್ಯರ್ತರು ಈ ಬಾರಿ ತುಂಬಾ ಉತ್ಸಾಹದಲ್ಲಿದ್ದಾರೆ. ಜೆಡಿಎಸ್‌ ಹೊಸ ಇತಿಹಾಸಕ್ಕೆ ತೆರೆದುಕೊಳ್ಳಲಿದೆ ಎಂದರು.ಈ ಸಂದರ್ಭದಲ್ಲಿ ಹೆಚ್‌.ವಿ ಮಹೇಶ್ವರಪ್ಪ, ಪರಂಧಾಮ ರೆಡ್ಡಿ, ಚಾಬೂ ಸಾಬ್‌, ಶಾಂತಾ ಸುರೇಂದ್ರ, ನಾಗರಾಜ್‌ ಕಂಕಾರಿ, ಪಾಲಾಕ್ಷಿ ಮುಂತಾದವರಿದ್ದರು.

ಈ ಮೊದಲೇ ಹೇಳಿದಂತೆ ಆಯನೂರು ಮಂಜುನಾಥ್‌ ಈಶ್ವರಪ್ಪ ಅವರಾಗಲಿ, ಅವರ ಪುತ್ರ ನಾಗಲಿ ಅಥವಾ ಅವರ ತದ್ರೂಪಿನಂತೆ ಇರುವ ವ್ಯಕ್ತಿಯಾಗಲಿ ಅವರ ವಿರುದ್ಧ ರ್ಸ್ಪಸಿ ಗೆಲುವು ಸಾಸುವೆ ಎಂಬ ತಮ್ಮ ಹೇಳಿಕೆಗೆ ಅವ ರು ಇಂದು ಕೂಡ ಬದ್ಧರಾದರು.

ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಮುಖ್ಯವಾಗಿ ನನಗೆ ಶಿವಮೊಗ್ಗದಲ್ಲಿ ಶಾಂತಿ ಬೇಕಾಗಿದೆ ಎಂದು ಪುನರುಚ್ಚರಿಸಿದರು. ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಪ್ರಾಂತೀಯ ಪಕ್ಷದಿಂದ ನಾನು ರ್ಸ್ಪಸಿದ್ದೇನೆ. ಅದಕ್ಕಾಗಿ ವಿಶೇಷ ತಯಾರಿ ನಡೆಸಿದ್ದೇನೆ. ಶಿವಮೊಗ್ಗದಲ್ಲಿ 30 ವರ್ಷಗಳ ಕಾಲ ಏಕತಾನತೆಯ ರಾಜಕಾರಣ ವನ್ನು ನೋಡಿದ ಜನತೆಗೆ ಹೊಸತನ ಬೇಕಾಗಿದೆ. ಅದರ ಅನುಭವ ಕೂಡ ನಮಗಾಗುತ್ತಿದೆ. ಅತಿಹೆಚ್ಚು ಮತಗಳ ಅಂತರದಿಂದ ನಾನು ಗೆಲ್ಲುತ್ತೇನೆ ಎಂದರು.

ಚೆನ್ನಬಸಪ್ಪ ಅವರು ಸ್ಪರ್ಧೆಗೆ ಸಂಬಂಸಿದಂತೆ ಮಾತನಾಡಿದ ಅವರು, ಚೆನ್ನಬಸಪ್ಪ ಅವರು ಈಶ್ವರಪ್ಪ ಅವರ ಪ್ರತಿರೂಪವೇ ಆಗಿದ್ದಾರೆ. ಅದಕ್ಕಿಂತ ಒಂದು ಕೈ ಮಿಗಿಲು ಎನ್ನಬಹುದು. ಅವರದೇ ಸಿದ್ಧಾಂತದ ವ್ಯಕ್ತಿ ಚೆನ್ನಬಸಪ್ಪ. ನಾನು ಅತ್ಯಂತ ಆತ್ಮವಿಶ್ವಾಸದಿಂದಲೇ ನಾಮಪತ್ರ ಸಲ್ಲಿಸಿದ್ದೇನೆ. ಜನ ಈ ಬಾರಿ ಬದಲಾವಣೆ ಬಯ ಸಿದ್ದಾರೆ.ನನ್ನ ಗೆಲುವು ಖಚಿತ ಎಂದರು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್‌, ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಶಾರದಾ ಪೂರ್ಯ್ನಾಯ್ಕ, ರಾಮಕೃಷ್ಣ  ಇದ್ದರು.