ಜಿಲ್ಲಾ ಸುದ್ದಿ

ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ

ಶಿವಮೊಗ್ಗ: ದಾನದಿಂದ ಸಿಗುವ ತಪ್ತಿಭಾವ ಮತ್ತೆಲ್ಲೂ ಸಿಗುವುದಿಲ್ಲ. ಜೀವ ಉಳಿಸುವ ಶ್ರೇಷ್ಠ ಕಾಯಕ ರಕ್ತದಾನ ಆಗಿದ್ದು, ಪ್ರತಿಯೊಬ್ಬ ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ಬಸವ ಕೇಂದ್ರದ ಡಾ। ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.

ವಿಶ್ವಗುರು ಬಸವ ಜಯಂತಿ ಪ್ರಯುಕ್ತ ಶಿವಮೊಗ್ಗ ನಗರದ ಬಸವಕೇಂದ್ರದಲ್ಲಿ ಆಯೋಜಿಸಿದ್ದ ರಕ್ತಾಮೃತ ದಾಸೋಹ ಕಾರ್ಯ ಕ್ರಮಕ್ಕೆ ಸ್ವತಃ ತಾವು ಕೂಡ ರಕ್ತದಾನ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ನಾವು ಮಾಡುವ ರಕ್ತದಾನ ದಿಂದ ತುರ್ತು ಸಂದರ್ಭದಲ್ಲಿ ಇರುವ ಮೂರ ನಾಲ್ಕು ಜನರಿಗೆ ಅನುಕೂಲ ಆಗುತ್ತದೆ. ಮತ್ತೊಬ್ಬರ ಜೀವ ಉಳಿಸುವ ಕಾರ್ಯಕ್ಕೆ ನೆರವಾಗುತ್ತದೆ. ರಕ್ತದಾನ ಮಾಡು ವುದರಿಂದ ನಮ್ಮ ಆರೋಗ್ಯವು ಚೆನ್ನಾಗಿರಲು ಸಹಕಾರಿ ಆಗುತ್ತದೆ.  ಸದಾ ಲವಲವಿಕೆಯಿಂದ ಸಾಧ್ಯವಾ ಗುತ್ತದೆ ಎಂದರು.

ರಕ್ತದಾನ ಬಗ್ಗೆ ಅನೇಕರಲ್ಲಿ ಭಯ ಇದ್ದು, ರಕ್ತದಾನ ಮಾಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಆರೋಗ್ಯ ವಂತ ಯುವಜನರು ವೈದ್ಯರ ಮಾರ್ಗ ದರ್ಶನದಲ್ಲಿ ರಕ್ತದಾನ ಮಾಡಬಹುದಾಗಿದೆ. ರಕ್ತದ ಕೊರತೆ ಇದ್ದು, ಹೆಚ್ಚು ಹೆಚ್ಚು ರಕ್ತದಾನ ಶಿಬಿರಗಳು ಆಯೋಜನೆ ಆಗಬೇಕು. ಇದರಿಂದ ರಕ್ತದ ಬೇಡಿಕೆ ಪೂರೈಸಬಹುದು ಎಂದರು.

ಇದೇ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಘಟಕ ಪದಾಧಿಕಾರಿಗಳು, ಬಸವ ಕೇಂದ್ರದ ಭಕ್ತರು, ವಿವಿಧ ಸಂಘ ಟನೆ ಸದಸ್ಯರು ರಕ್ತದಾನ ಮಾಡಿದರು. ವಿಶ್ವಗುರು ಬಸವಣ್ಣರಿಗೆ ಪೂಜೆ, ಅಂಬಲಿ ದಾಸೋಹ ನಡೆಯಿತು. ವಿಶ್ವ ಗುರು ಬಸವಣ್ಣ ಹಾಗೂ ವಚನ ಸಾಹಿತ್ಯದ ಪಲ್ಲಕ್ಕಿ ಉತ್ಸವ ಬಸವಕೇಂದ್ರದ ವೆಂಕ ಟೇಶ ನಗರದ ಅನಕ ರಸ್ತೆ ಹಾಗೂ ವಿವಿಧ ಬಡಾವಣೆಗಳಲ್ಲಿ ನಡೆಯಿತು.ವಿಧಾನ ಪರಿಷತ್‌ ಸದಸ್ಯ ಎಸ್‌. ರುದ್ರೇಗೌಡ, ಮಾಜಿ ಶಾಸಕ ಎಚ್‌.ಎಂ. ಚಂದ್ರಶೇಖರ, ಎಚ್‌.ಸಿ. ಯೋಗೀಶ್‌, ಎಸ್‌.ಪಿ. ದಿನೇಶ್‌, ರುದ್ರಮುನಿ ಸಜ್ಜನ್‌, ಬಸವಕೇಂದ್ರದ ಅಧ್ಯಕ್ಷ ಡಿ.ಜಿ. ಬೆನಕಪ್ಪ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಜಿ.ವಿಜಯ್‌ ಕುಮಾರ್‌, ನಾಗರಾಜ ಕಂಕಾರಿ, ಮಲ್ಲಿಕಾರ್ಜುನ ಕಾನೂರು, ಡಿ. ನಾಗರಾಜ, ಶಿವಕುಮಾರ, ಧವ ಕುಮಾರ, ಮಹೇಶಮೂರ್ತಿ, ಮಹಾರುದ್ರ, ಬಾರಂದೂರು ಪ್ರಕಾಶ, ಶಿವಯೋಗಿ ಹಂಚಿ ನಮನೆ ಉಪಸ್ಥಿತರಿದ್ದರು.