ಶಿವಮೊಗ್ಗಶಿವಮೊಗ್ಗ ನಗರ

ವಿಜೃಂಭಣೆಯಿಂದ ನಡೆದ ಬ್ರಹ್ಮ ರಥೋತ್ಸವ

ಶಿವಮೊಗ್ಗ : ಮಲವಗೊಪ್ಪದ ಶ್ರೀ ಚನ್ನಬಸವೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾ ದರು.

ಮಲವಗೊಪ್ಪದ ಸುತ್ತಮು ತ್ತಲ ಬಡಾವಣೆ ಮತ್ತು ಗ್ರಾಮ ಗಳಿಂದ ಜನರು ಆಗಮಿಸಿದ್ದರು. ರಥೋತ್ಸವದ ವೇಳೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರು ದೇವರ ಘೋಷಣೆಗಳನ್ನು ಕೂಗಿದರು.

ಇದಕ್ಕೂ ಮೊದಲು ಅರ್ಚಕರ ಮನೆಯಲ್ಲಿ ಶ್ರೀ ಚನ್ನಬಸವೇಶ್ವರ ಸ್ವಾಮಿಗೆ ರುದ್ರಾಭಿ?ೇಕ, ಪೂಜೆ, ಬಾಸಿಂಗ ಧಾರಣೆ, ಮಹಾ ಮಂಗ ಳಾರತಿ ನಡೆಯಿತು. ಬಳಿಕ ರಾಜ ಬೀದಿ ಉತ್ಸವ ನೆರವೇರಿಸಲಾ ಯಿತು.

ಭಗತ್‌ ಸಿಂಗ್‌ ಯುವಕರ ಸಂಘದ ಅಧ್ಯಕ್ಷ ಶಶಿಕುಮಾರ್‌ ನೇತೃತ್ವದಲ್ಲಿ ಭಕ್ತಾದಿಗಳಿಗೆ ಗ್ರಾಮಸ್ಥರಿಗೆ ಪ್ರಸಾದ ಮತ್ತು ಪಾನಕ ಸೇವೆ ನಡೆಯಿತು. ಸಂಘದ ಸದಸ್ಯರು ಪದಾಽ ಕಾರಿಗಳು ಗ್ರಾಮಸ್ಥರು ಭಾಗವಹಿಸಿದ್ದರು.