ಜಿಲ್ಲಾ ಸುದ್ದಿ

ಪೂರ್ಣಗೊಂಡ ಹುಲಿಕಲ್‌ ಘಾಟಿ ಕಾಮಗಾರಿ

ಹೊಸನಗರ: ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ  (ಹುಲಿಕಲ್‌) ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಶನಿವಾರ ರಾತ್ರಿಯಿಂದ ವಾಹನ ಸಂಚಾರ ಮತ್ತೆ ಆರಂಭವಾಗಿದೆ.

ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ನಿರ್ಮಾಣ ಕಾಮಗಾರಿಗಳಾಗಿ ಫೆ. 5 ರಿಂದ ಏ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಸಿ ಜಿಲ್ಲಾಧಿಕಾರಿಗಳು ಆದೇಶಿಸಿದರು. ಆ ಬಳಿಕ ಏ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ಸ್ಥಗಿತಗೊಂಡಿದೆ. ಈಗ ವಾಹನ ಸಂಚಾರಕ್ಕೆ ಒದಗಿಸಲಾ ಗಿದೆ.

3.5 ಕಿ.ಮೀ. ಕಾಮಗಾರಿ:

ಕುಂದಾಪುರ-ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದುಹೋಗುವ ಬಾಳೆಬರೆ ಘಾಟಿಯ ಉಡುಪಿ ಜಿಲ್ಲಾ ಯೋಜನೆ 3 ಕೋಟಿ ರೂ. ವೆಚ್ಚದಲ್ಲಿ ಅಂದಾಜು 1 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲಾ 10 ಕೋಟಿ ರೂ. ವೆಚ್ಚದಲ್ಲಿ 2.5 ಕಿ.ಮೀ. ಸೇರಿದಂತೆ ಒಟ್ಟು 3.5 ಕಿ.ಮೀ. ದೂರದವರೆಗೆ ರಸ್ತೆ ಅಗಲ, ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ ನಿರ್ಮಾಣ ಕಾರ್ಯ ನಡೆದಿದೆ.

3.5 ಕಿ.ಮೀ. ಅಭಿವದ್ಧಿ ಬಾಕಿ:

ಬಾಳೆಬರೆ ಘಾಟಿಯು ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆ ಸೇರಿ ಹುಲಿಕಲ್‌ ಚೆಕ್‌ ಪೋಸ್ಟ್ ನಿಂದ ಹೊಸಂಗಡಿಯ ಘಾಟಿಯ ಬುಡದ ವರೆಗೆ 14.5 ಕಿ.ಮೀ. ದೂರವಿದೆ. ಶಿವಮೊಗ್ಗ ಜಿಲ್ಲೆ 8 ಕಿ.ಮೀ. ಹೊರಗೆ ಈ ಹಿಂದೆ ಸ್ವಲ್ಪ ಕಾಂಕ್ರಿಟೀಕರಣ ಆಗಿದ್ದು, ಈಗ ಬಾಕಿಯಿತ್ತು 2.5 ಕಿ.ಮೀ. ನೊಂದಿಗೆ ಕಾಂಕ್ರಿಟೀಕರಣಗೊಂ ಡಿದೆ. ಉಡುಪಿ ಜಿಲ್ಲೆ 6.5 ಕಿ.ಮೀ. ಘಾಟಿಯ ಹೊರಗೆ ಈ ಹಿಂದೆ 2 ಕಿ.ಮೀ., ಈಗ 1 ಕಿ.ಮೀ. ಸೇರಿದಂತೆ ಒಟ್ಟು 3 ಕಿ.ಮೀ. ಕಾಂಕ್ರಿಟೀಕರಣಗೊಂಡಂತಾಗಿದೆ. ಇನ್ನು ಉಡುಪಿ ಜಿಲ್ಲೆಯ ಭಾಗ 3.5 ಕಿ.ಮೀ. ಘಾಟಿ ರಸ್ತೆ ಕಾಂಕ್ರಿಟೀಕರಣ ಬಾಕಿ ಇದೆ.