ಜಿಲ್ಲಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ಅರ್ಹರಿಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತಾಗಬೇಕು: ನ್ಯಾ.ಬಿ.ವೀರಪ್ಪ

ಶಿವಮೊಗ್ಗ :ಅರ್ಹರಿಗೆ ಉಚಿತ ಕಾನೂನು ಸೇವೆ, ಸಲಹೆ ನೀಡುವುದಲ್ಲದೆ ಈಗಾಗಲೇ ನ್ಯಾಯಾಲಯದಲ್ಲಿ ದಾಖಲಾಗಿ ರುವ ಮೊಕದ್ದಮೆಗಳನ್ನು ತ್ವರಿತಗ ತಿಯಲ್ಲಿ ವಿಲೇವಾರಿ ಮಾಡು ವುದು, ಲೋಕ ಅದಾಲತ್‌ನಲ್ಲಿ ಪ್ರಕರಣಗಳು ವಿಚಾರಣೆಗೆ ಬರುವ ಮುನ್ನವೇ ರಾಜೀಸಂದಾನದ ಮೂಲಕ ಇತ್ಯರ್ಥಗೊಳಿಸಿ, ಜನ ಸಾಮಾನ್ಯರ ನೆಮ್ಮದಿಯ ಬದುಕಿಗೆ ಅವಕಾಶ ಕಲ್ಪಿಸುವುದು ಕಾನೂನು ಸೇವಾ ಪ್ರಾಕಾರದ ಉದ್ದೇಶವಾ ಗಿದೆ ಎಂದು ಹೈಕೋರ್ಟ್‌ನ ಹಿರಿಯ ನ್ಯಾಯಾೕಶ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಕಾರದ ಅಧ್ಯಕ್ಷ ಕಾರ್ಯ್ಧ್ಯಕ್ಷ ಬಿ.ವೀರಪ್ಪ ಅವರು ಹೇಳಿದರು.

ಅವರು  ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ವಕೀಲರ ಸಂಘ, ಪೀಪಲ್‌ ಲಾಯರ್‌್ಸ ಗಿಲ್‌್ಡ ಮತ್ತು ಎಸ್‌.ಎಸ್‌.ಎಸ್‌.ಎಂ.ಎಸ್‌. ಸ್ವಯಂ ಸೇವಾ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಕಾನೂನು ಅರಿವು – ನೆರವು ಮಹಾಮೇಳ ವನ್ನು ಉದ್ಘಾಟಿಸಿ ಅವರು ಮಾತ ನಾಡುತ್ತಿದ್ದರು.

ರಾಜ್ಯದಲ್ಲಿಯೇ  ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರಿ ಗಾಗಿ ನಗರದ ಮೆಗ್ಗಾನ್‌ ಆಸ್ಪತ್ರೆ ಯಲ್ಲಿ ಚಿಕಿತ್ಸಾ ಕೊಠಡಿಯನ್ನು ಆರಂಭಿಸಲಾಗಿರುವುದು ಸಂತಸದ ಸಂಗತಿ.

ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆ ಸವಾಲುಗಳು ಅನೇಕ. ಸಂವಿಧಾ ನದ ಆಶಯದಂತೆ ಅವರಿಗೂ ಸಮಾನವಾದ ಹಕ್ಕು ಮತ್ತು ಅವಕಾಶಗಳನ್ನು ಒದಗಿಸಲಾಗಿದೆ. ಆದರೂ ಇನ್ನಷ್ಟು ಸೇವಾ -ಸೌಲ ಭ್ಯಗಳು ದೊರೆಯುವಂತಾಗಬೇಕು ಎಂದ ಅವರು ಭಾರತೀಯ ಸೈನ್ಯ ದಲ್ಲೂ ಲಿಂಗತ್ವ ಅಲ್ಪಸಂಖ್ಯಾತರು ಸೇವೆ ಸಲ್ಲಿಸುವಂತಾಗಬೇಕೆಂದರು.

ಭ್ರಷ್ಟಾಚಾರ ನಾಗರೀಕ ಸಮಾಜದ ಕಳಂಕ. ಅದು ಕ್ಯಾನ್ಸರ್‌ ಇದ್ದಂತೆ. ಮನೆಯಲ್ಲಿನ ಪ್ರತಿ ಮಹಿಳೆಯರು ಮನೆಯ ಯಜ ಮಾನ ತರುವ ಹಣ ನ್ಯಾಯದ ಸಂಪಾದನೆಯೇ ಎಂದು ಪ್ರಶ್ನಿಸುವಂತಾಗಬೇಕು. ತಪ್ಪಿದಲ್ಲಿ ಅದು ಭ್ರಷ್ಟಾಚಾರಕ್ಕೆ ಸಹಕಾರ ನೀಡಿದಂತೆ ಎಂದ ಅವರು ಈ ನಿಟ್ಟಿನಲ್ಲಿ ಎಲ್ಲಾ ಮಹಿಳೆಯರು ಸಂಕಲ್ಪ ಮಾಡುವಂತೆ ಸೂಚಿಸಿ ದರು.

ಇತ್ತೀಚೆಗೆ ನೀಡಿದ ಒಂದು ಮಹತ್ವದ ತೀರ್ಪಿನಿಂದ ಸಾರಿಗೆ ನಿಯಮಗಳ ಅನುಷ್ಟಾನದಲ್ಲಿ ಅಲ್ಪ ಸಡಿಲಿಕೆ ಮಾಡಿದ್ದರಿಂದಾಗಿ ಪ್ರಕರ ಣಗಳು ನಿಯಂತ್ರಣಕ್ಕೆ ಬಂದಿವೆ ಮಾತ್ರವಲ್ಲ ಕೋಟ್ಯಾಂತರ ರೂಪಾಯಿಗಳ ಆದಾಯ ಸರ್ಕಾರಕ್ಕೆ ಬಂದಿದೆ ಎಂದರು.

ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ಶಿಕ್ಷಣ ನೀಡಬೇಕು. ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಪ್ರತಿ ವ್ಯಕ್ತಿ ಯೂ ಮಾನವೀಯ ನೆಲೆಯಲ್ಲಿಲ ಜೀವನ ನಿರ್ವಹಣೆ ಮಾಡಬೇಕು. ಮಕ್ಕಳು ತಮ್ಮ ಪೋಷಕರನ್ನು ನಿರ್ಲಕ್ಷಿಸುವುದು ಸಲ್ಲದು ಎಂದ ಅವರು, ಸಾಧ್ಯವಿರುವಲ್ಲಿ ಮರ- ಗಿಡಗಳನ್ನು ಬೆಳೆಸಿ, ಸ್ವಚ್ಚ, ಸ್ವಸ್ಥ ಹಾಗೂ ಸುಂದರ ಪರಿಸರ ನಿರ್ಮಾಣಕ್ಕೆ ಸಹಕರಿಸುವಂತೆ ಅವರು ಮನವಿ ಮಾಡಿದರು. ಶಿಕ್ಷಣ ಉತ್ತಮ ಬದುಕಿನ ಬ್ರಹ್ಮಾಸ. ಶಿಕ್ಷಿತರ ಜೀವನ ಸುಖಮಯ ವಾಗಿರಲಿದೆ. ವ್ಯಕ್ತಿಗೆ ವಿದ್ಯೆಯೊಂದಿಗೆ ವಿನಮ್ರತೆಯೂ ಭೂಷಣ ತರಲಿದೆ. ಅಶಿಕ್ಷಿತ ಹೆಚ್ಚು ಸಂಕಷ್ಟ ಕ್ಕೊಳಗಾಗುತ್ತಾನೆ.

ಶಿಕ್ಷಣ ಎಲ್ಲರ ಬಲಿಷ್ಟ ಅಸವಾಗಿದೆ. ಅದರಲ್ಲೂ ಕೆಲವು ಸಾಮಾಜಿಕ ಹೊಣೆಗಾರಿಕೆ ಮರೆತ ವಿದ್ಯಾವಂತರಿಂದಲೇ ಮೋಸ- ವಂಚನೆ ನಡೆಯುತ್ತಿರು ವುದು ಆತಂಕಕಾರಿ ಬೆಳವಣಿಗೆ ಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ  ಪ್ರಧಾನ ಜಿಲ್ಲಾ ಸತ್ರ ನ್ಯಾಯಾೕಶ ಮಲ್ಲಿ ಕಾರ್ಜುನಗೌಡ, ಜಿಲ್ಲಾಕಾರಿ ಡಾ॥ ಆರ್‌.ಸೆಲ್ವಮಣಿ, ಕಾನೂನು ಸೇವಾ ಪ್ರಾಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಕಾರಿ ಮಿಥು ನ್‌ಕುಮಾರ್‌,ಜಿಪಂ,ಮುಖ್ಯ ಕಾರ್ಯನಿ ರ್ವಾಹಕ ಅಕಾರಿ ಸ್ನೇಹಲ್‌ ಸುಧಾಕರ್‌ ಲೋಖಂಡೆ, ವಕೀಲರ ಸಂಘದ  ಅಧ್ಯಕ್ಷ ಬಿ.ಜಿ.ಶಿವಮೂರ್ತಿ, ಸಿಮ್ಸೌ ನಿರ್ದೇಶಕ ಡಾ॥ ವಿರೂಪಾಕ್ಷಪ್ಪ, ಎಸ್‌.ಎಸ್‌.ಎಸ್‌. ಎಂ.ಎಸ್‌. ಸಂಸ್ಥೆಯ ನಿರ್ದೇಶಕ ಾ॥ ಕ್ಲೆೀರ್ಡ್‌ ರೋಷನ್‌ ಪಿಂಟೋ, ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ ಸೇರಿದಂತೆ ಅನೇಕ ಗಣ್ಯರು, ಅಕಾರಿಗಳು, ಸ್ವಯಂ ಸೇವಾ ಸಂಸ್ಥೆ ಗಳ ಪ್ರತಿನಿಗಳು, ಲಿಂಗತ್ವ ಅಲ್ಪ ಸಂಖ್ಯಾತರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಕುವೆಂಪು ರಂಗಮಂದಿರದ ಆವರ ಣದಲ್ಲಿ ಸ್ಥಾಪಿಸಲಾಗಿದ್ದ ಮಹಿಳಾ ಸ್ವಸಹಾಯ ಗುಂಪುಗಳ ಪ್ರತಿನಿಗಳು ಉತ್ಪಾದಿಸುತ್ತಿರುವ ಉತ್ಪನ್ನ ಗಳು, ಸರ್ಕಾರದ ವಿವಿಧ ಇಲಾಖಾ ಯೋಜನೆಗಳ ಕುರಿತು ಮಾಹಿತಿ ಒದಗಿಸುವ ಸ್ಟಾಲ್‌ ಗಳನ್ನು ಹೈಕೊ ೕರ್ಟ್‌ನ ಹಿರಿಯ ನ್ಯಾಯಾೕಶ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಕಾರದ ಅಧ್ಯಕ್ಷ ಕಾರ್ಯ್ಧ್ಯಕ್ಷ ಬಿ.ವೀರಪ್ಪ ಅವರು ಗಣ್ಯರೊಂದಿಗೆ ವೀಕ್ಷಿಸಿ, ಮಾಹಿತಿ ಪಡೆದರು.