ಶಿವಮೊಗ್ಗಶಿವಮೊಗ್ಗ ನಗರ

ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕೆ ರಾಜ್ಯ-ಕೇಂದ್ರ ಸರ್ಕಾರಗಳ ಕೊಡುಗೆ ಅಪಾರ : ಬಿ.ವೈ.ರಾಘವೇಂದ್ರ

ಶಿವಮೊಗ್ಗ : ಸರ್ವಸನ್ನದ್ಧವಾ ಗಿದ್ದು, ಜನರ ಅಗತ್ಯಗಳಿಗನು ಗುಣವಾಗಿ ರೂಪಿಸಿ ಸಲ್ಲಿಸುವ ಪ್ರಸ್ತಾವನೆಗಳಿಗೆ ಪೂರಕ ಅನು ದಾವನ್ನು ನೀಡಿ ಸಹಕಾರ ನೀಡಿವೆ. ಹಿಂದೆಂದಿಗಿಂತ ಜಿಲ್ಲೆ ಅತ್ಯಂತ ವೇಗವಾಗಿ ಮುಂದುವರೆಯುತ್ತಿ ರುವುದು ಇದಕ್ಕೆ ಪ್ರತ್ಯಕ್ಷ ನಿದರ್ಶ ನವಾಗಿದೆ ಎಂದು ಬಿ.ವೈ .ರಾಘ ವೇಂದ್ರ ಅವರು ಹೇಳಿದರು.
ಅವರು ಗುರುವಾರ ಜಿಲ್ಲಾ ಡಳಿತ, ಜಿ.ಪಂ. ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಏರ್ಪಡಿಸ ಲಾಗಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಲಾ ನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಎಲ್ಲಾ ಇಲಾಖೆಗಳ ಅಽ ಕಾರಿಗಳ ಸತತ ಪರಿಶ್ರಮದಿಂದಾಗಿ ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಲು ಸಾಧ್ಯ ವಾಗಿದ್ದು, ಅದಕ್ಕಾಗಿ ಶ್ರಮಿಸಿದ ಎಲ್ಲಾ ಅಽ ಕಾರಿ-ಸಿಬ್ಬಂಽ ಗಳು ಅಭಿನಂದನಾರ್ಹರು ಎಂದರು.
ಕಳೆದೆರೆಡು ವರ್ಷದಲ್ಲಿ ದೇಶ ದಾದ್ಯಂತ ವ್ಯಾಪಿಸಿದ್ದ ಕೊರೋನ ಮಹಾಮಾರಿಯನ್ನು ನಿಯಂತ್ರಿ ಸುವಲ್ಲಿ ಕೇಂದ್ರ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟು, ದೇಶದಲ್ಲಿಯೇ ತಯಾರಿಸಲಾದ ಉತ್ತಮ ಗುಣ ಮಟ್ಟದ ಲಸಿಕೆಯನ್ನು ದೇಶವಾಸಿ ಗಳಿಗೆ ಉಚಿತವಾಗಿ ನೀಡಲಾಗಿದೆ ಅಲ್ಲದೇ ವಿಶ್ವದ 42ಕ್ಕೂ ಹೆಚ್ಚಿನ ರಾಷ್ಟ್ರಗಳಿಗೆ ವಿತರಿಸಿ, ಸಹಕಾರಿ ಯಾಗಿರುವುದು ಅತ್ಯಂತ ಸಮಾ ಧಾನದ ಸಂಗತಿಯಾಗಿದೆ ಎಂದರು.
ದೇಶಕ್ಕೆ ಅಪಾಯ ಎದುರಾದ ಸಂದರ್ಭದಲ್ಲಿ ಅಂಜದೇ ಸರ್ಜಿ ಕಲ್‌ ಸೆ್ಟ್ರೖಕ್‌ನಂತಹ ಅಚಲ ನಿರ್ಧಾ ರವನ್ನು ಕೈಗೊಂಡು ದೇಶದ ರಕ್ಷಣೆಗೆ ಮುಂದಾಗಿರುವುದು ಪ್ರಧಾನಮಂತ್ರಿಗಳ ಕಾರ್ಯತತ್ಪ ರತೆಗೆ ಸಾಕ್ಷಿಯಾಗಿದೆ ಎಂದ ಅವರು, ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಉತ್ತಮ ಆರೋಗ್ಯ ಯೋಜನೆಯಾಗಿದ್ದು, ರಾಜ್ಯದಲ್ಲಿ ಈ ಯೋಜನೆಯಡಿ 3.11ಕೋಟಿ ಜನ ನೋಂದಣಿ ಮಾಡಿಸಿದ್ದಾರೆ. ರಾಜ್ಯದ 2.32 ಕೋಟಿ ಸದಸ್ಯರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಅತ್ಯಲ್ಪ ಅವಽಯಲ್ಲಿ ಜಿಲ್ಲೆಯ 2.90 ಮನೆಗಳಿಗೆ ಶುದ್ಧ ಕುಡಿಯುವ ನೀರಿನ ನಲ್ಲಿ ಸಂಪರ್ಕ ಕಲ್ಪಿಸಲಾ ಗಿದೆ ಎಂದರು.
2008ರಲ್ಲಿ ಅಸ್ತಿತ್ವದಲ್ಲಿದ್ದ ಸರ್ಕಾರವು ರೂಪಿಸಿ ಅನುಷ್ಠಾನ ಗೊಳಿಸಿದ ಭಾಗ್ಯಲಕ್ಷಿ ದೂರದೃಷ್ಟಿ ಯೋಜನೆಯ ಅನುಷ್ಠಾನದಿಂ ದಾಗಿ ಮುಂದಿನ ವರ್ಷಕ್ಕೆ 18ತುಂಬಲಿರುವ ಬಾಂಡ್‌ ಪಡೆದ ಪ್ರತಿ ಹೆಣ್ಣುಮಗುವಿಗೆ ಒಂದು ಲಕ್ಷ ರೂಪಾಯಿಗಳ ಆರ್ಥಿಕ ಸಹಾಯ ದೊರೆಯಲಿದೆ. ಜಿಲ್ಲೆಯಲ್ಲಿ ಸುಮಾರು 1.50ಲಕ್ಷ ಯುವತಿ ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ಸರಬರಾಜು ಮಾಡಲಾಗಿದೆ. ಈ ಯೋಜನೆ ಯಿಂದಾಗಿ ರಾಜ್ಯ ಸರ್ಕಾರ ಪ್ರತಿ ವರ್ಷ 20,000ಕೋಟಿ ರೂ. ಗಳನ್ನು ವಿದ್ಯುತ್‌ ನಿಗಮಕ್ಕೆ ರೈತರ ಪರವಾಗಿ ಪಾವತಿಸಿದೆ. ರಸಗೊ ಬ್ಬರ ಸಬ್ಸಿಡಿ ನೀಡಿ, ರೈತರ ಆರ್ಥಿಕ ಹೊರೆ ಕಡಿಮೆಗೊಳಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ರಸ್ತೆ, ರೈಲು, ವಿಮಾನ ಸೇರಿದಂತೆ ಎಲ್ಲಾ ಸಂಚಾರಕ್ಕೆ ಪೂರಕ ವಾತಾವರಣ ನಿರ್ಮಿಸಲಾಗಿದೆ. ವಿಶೇಷವಾಗಿ ರೈಲು ಸಂಪರ್ಕ ಕಲ್ಪಿಸುವಲ್ಲಿ ವಿಶೇಷ ಕ್ರಾಂತಿಯಾಗಿದೆ. ಇತ್ತೀ ಚಿನ ರೈಲ್ವೆ ಕ್ಷೇತ್ರದ ಕಾರ್ಯಗಳಿ ಂದಾಗಿ ಜಿಲ್ಲೆಯ ಜನರು ದೇಶ ದಾದ್ಯಂತ ಸಂಚರಿಸಲು ಅವಕಾಶ ದೊರೆತಂತಾಗಿದೆ. ಸ್ವಾತಂತ್ರ್ಯ್ ನಂತರದ ಹಲವು ದಶಕಗಳಲ್ಲಿ ಆಗದಿರುವ ರೈಲ್ವೆ ಅಭಿವೃದ್ಧಿ ಕಾರ್ಯಗಳು ಕೆಲವೇ ವರ್ಷಗಳಲ್ಲಿ ಕಾರ್ಯರೂಪಕ್ಕೆ ಬಂದಿವೆ. ವಿಶೇಷ ವಾಗಿ ಶಿವಮೊಗ್ಗ ರಾಣೇಬೆನ್ನೂರು ರೈಲು ಮಾರ್ಗಕ್ಕೆ 1250ಕೋಟಿ ರೂಪಾಯಿಗಳ ವೆಚ್ಚದ ಯೋಜನೆ ಅನುಷ್ಠಾನ ಕಾರ್ಯ ಭರದಿಂದ ಸಾಗಿದೆ ಎಂದ ಅವರು ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೆ ಸಾಕಷ್ಟು ಅನುದಾನ ಬಿಡುಗಡೆಗೊಂಡಿದೆ ಎಂದರು.
ಅಲ್ಲದೇ ಶಿವಮೊಗ್ಗ- ಆನಂದಪುರ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 669ಕೋಟಿ ಹಾಗೂ ಹೊಸೂರು, ತಾಳಗುಪ್ಪ ಸೇರಿದಂತೆ ಸಾಗರ ತಾಲೂಕಿನ ಮೂರು ಮೇಲ್ಸೇತುವೆಗಳ ನಿರ್ಮಾಣಕ್ಕೆ 200ಕೋಟಿ ರೂ.ಗಳ ಅನುದಾನ ಈಗಷ್ಟೆ ಬಿಡುಗಡೆಯಾಗಿದೆ ಎಂದರು.ಜಿಲ್ಲೆಯ ಲಕ್ಷಾಂತರ ಸಂಖ್ಯೆಯ ಲಾನುಭವಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಲಾನುಭ ವಿಗಳಾಗಿ ಯಾವುದೇ ಅಡತಡೆಗ ಳಿಲ್ಲದೆ ಸೌಲಭ್ಯ ಪಡೆದಿರುವುದು ಆಡಳಿತಾರೂಢ ಸರ್ಕಾರದ ಮಹ ತ್ವದ ಸಾಧನೆಗಳಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಲಾನು ಭವಿಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕೇಂದ್ರ ಪುರಸ್ಕತ ಆಯು ಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ ಯೋಜನೆ ಜನಸಾ ಮಾನ್ಯರ ನೆಮ್ಮದಿಯ ಬದುಕಿಗೆ ಆಸರೆಯಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ಸಾಮಾ ನ್ಯನೂ ಕೂಡ ಉತ್ಕಷ್ಠ ದರ್ಜೆಯ ಉಚಿತ ಆರೋಗ್ಯ ಸೇವೆ ಪಡೆಯಲು ಸಾದ್ಯವಾಗಿದೆ. ದೇಶ ದ ಉನ್ನತಿಗೆ ಶ್ರಮಿಸುವ ರೈತರ ಕೃಷಿಗೆ ಭದ್ರತೆ ಹಾಗೂ ವಿಮಾ ಸೌಲಭ್ಯ ಒದಗಿಸಲಾಗಿರುವುದು ಕೂಡ ಜನರ ಪ್ರಶಂಸೆಗೆ ಪಾತ್ರ ವಾದ ಯೋಜನೆಯಾಗಿದೆ. ಜನ್‌ ಧನ್‌ ಖಾತೆಯ ಮೂಲಕ ಶೂನ್ಯ ಠೇವಣಯ ಮೂಲಕ ಖಾತೆ ಆರಂಬಿಸಿದ ಖಾತೆದಾರರಿಗೆ ಗರಿಷ್ಟ 2ಲಕ್ಷ ರೂ.ಗಳ ವಿಮಾ ಸೌಲಭ್ಯ ಒದಗಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಂತ ರ್ಜಾತಿ ವಿವಾಹಿತರು, ಸಲ್‌ ಬಿಮಾ, ರೈತ ವಿದ್ಯಾನಿಽ , ಜೀವ ಜಲ ಯೋಜನೆ, ಟೂರಿಸ್‌್ಟ ಟ್ಯಾಕ್ಸಿ ಖರೀದಿ ಯೋಜನೆ, ನಿವೇಶನ ಹಕ್ಕುಪತ್ರ, ಗಂಗಾಕಲ್ಯಾಣ, ಉನ್ನತ ಶಿಕ್ಷಣಕ್ಕೆ ಸಹಾಯಧನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌, ಕೃಷಿಕರಿಗೆ ಯಂತ್ರೋಪಕರಣ ಟ್ರಾಕ್ಟರ್‌, ಟಿಲ್ಲರ್‌, ಅಡಿಕೆ ಕೊಯ್ಯುವ ದೋಟಿ, ಸೇರಿದಂತೆ ವಿವಿಧ ಇಲಾ ಖೆಗಳ ಸಹಸ್ರಾರು ಲಾನುಭವಿ ಗಳಿಗೆ ಸೌಲಭ್ಯವನ್ನು ವಿತರಿಸಲಾ ಯಿತು.
ಶಾಸಕ ಕೆ.ಎಸ್‌.ಈಶ್ವರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಕುಮಾರ್‌ ಬಂಗಾರಪ್ಪ, ವಿಧಾನ ಪರಿಷತ್‌ ಸದಸ್ಯರಾದ ಡಿ.ಎಸ್‌.ಅರುಣ್‌, ರುದ್ರೇಗೌಡ್ರು, ಆಯನೂರು ಮಂಜುನಾಥ್‌, ನಾರಾಯಣ ಸ್ವಾಮಿ, ಮೇಯರ್‌ ಶಿವ ಕುಮಾರ್‌, ಸೂಡಾ ಅಧ್ಯಕ್ಷ ನಾಗ ರಾಜ್‌, ಕಾಡಾ ಅಧ್ಯಕ್ಷೆ ಶ್ರೀಮತಿ ಪವಿತ್ರಾ ರಾಮಯ್ಯ, ಮಡಿವಾಳ ಅಭಿವೃದ್ಧಿ ನಿಗಮದ ಅಧ್ಯಕ್ಷ ತಲ್ಲೂರು ರಾಜು, ಜಿಲ್ಲಾಽ ಕಾರಿ ಡಾ॥ ಆರ್‌.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಽ ಕಾರಿ ಎಂ.ಡಿ. ಪ್ರಕಾಶ್‌, ಜಿಲ್ಲಾ ಪೊಲೀಸ್‌ ವರಿ ಷ್ಠಾಽ ಕಾರಿ ಮಿಥುನ್‌ಕುಮಾರ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಽ ಕಾರಿಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಽ ಗಳು ಉಪಸ್ಥಿತರಿದ್ದರು.
ಕೇಂದ್ರ ಮತ್ತು ರಾಜ್ಯ ಸರ್ಕಾ ರದಿಂದ ಜನರ ಆಶೋತ್ತರಗಳಿಗೆ ಪೂರಕವಾಗಿ ರೂಪಿಸಿ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನ ಗೊಳಿಸಲಾಗಿರುವ ಹಲವು ಯೋ ಜನೆಗಳ ಮಾಹಿತಿ ಯನ್ನೊಳ ಗೊಂಡ ನೂರಾರು ಸ್ಟಾಲ್‌ಗಳನ್ನು ನಿರ್ಮಿಸಿ, ಸಾರ್ವ ಜನಿಕರಿಗೆ ಯೋಜನೆಗಳ ಅರಿವು ಮೂಡಿಸ ಲಾಯಿತು. ವಿಶೇಷವಾಗಿ, ಸ್ವಚ್ಚ ಭಾರತ್‌, ಉದ್ಯೋಗ ಖಾತ್ರಿ, ಸರ್ವರಿಗೂ ಸೂರು, ಕೈಗಾರಿಕೆ, ಕೃಷಿ, ತೋಟಗಾರಿಕೆ, ಮೀನು ಗಾರಿಕೆ, ಪಶುಪಾಲನಾ ಇಲಾಖೆ, ರೇಷ್ಮೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾ ಖೆ, ಹಿಂದುಳಿದ ವರ್ಗಗಳ ಕಲ್ಯಾ ಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ವಿಕಲಚೇತನರ ಕಲ್ಯಾಣ ಇಲಾಖೆ, ಯುವ ಸಬ ಲೀಕರಣ ಮತ್ತು ಕ್ರೀಡಾ ಇಲಾಖೆ, ಆರೋಗ್ಯ ಇಲಾಖೆ, ಗ್ರಂಥಾ ಲಯ, ಕೌಶ ಲ್ಯಾಭಿವೃದ್ಧಿ, ಉದ್ಯ ಮಶೀಲತೆ ಮತ್ತು ಉದ್ಯಮ ಶೀಲತಾ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಜನಪರ ಯೋಜನೆಗಳ ಕುರಿತು ಮಾಹಿತಿ ಕೋಶಗಳನ್ನು ನಿರ್ಮಿಸ ಲಾಗಿತ್ತು.